ಸರ್ಕಾರಿ ಪ್ರಾಥಮಿಕ ಶಿಕ್ಷಕರ ಶಾಲಾವಾರು ವಿಷಯವಾರು UPDATED ಖಾಲಿ ಹುದ್ದೆಗಳ ಪಟ್ಟಿ (to be held on 20/10/2023)
ಪ್ರಾಥಮಿಕ ಶಾಲಾ ಶಿಕ್ಷಕರ ಶಾಲಾವಾರು ಮತ್ರಯ ವಿಷಯವಾರು ಅಪ್ಡೇಟ್ ಮಾಡಲಾದ ಪಟ್ಟಿ ದಿನಾಂಕ:20-10-2023 ರಂತೆ ಇದೆ.
ಶಿಕ್ಷಣ ಇಲಾಖೆಯು ಮತ್ತೆ 20 ಸಾವಿರ ಸರ್ಕಾರಿ ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆಸಿಕೊಂಡಿದೆ. ರಾಜ್ಯದಲ್ಲಿ ಈ ಹಿಂದೆ ಹೊರಡಿಸಿದ್ದ 13,500 ಶಿಕ್ಷಕರ ಹುದ್ದೆ ನೇಮಕ ಪ್ರಕ್ರಿಯೆಯ ಸಮಸ್ಯೆಗೆ ಹೈಕೋರ್ಟ್ನಿಂದ ಮುಂದಿನ ಡಿಸೆಂಬರ್ ಒಳಗೆ ಅಂತಿಮ ತೀರ್ಪು ನಿರೀಕ್ಷಿಸಲಾಗಿದೆ.
13,500 ಶಿಕ್ಷಕರ ನೇಮಕಾತಿ ತೀರ್ಪು ಹೈಕೋರ್ಟ್ನಲ್ಲಿದೆ.
ಆದರೆ ಶಿಕ್ಷಣ ಇಲಾಖೆ ಈಗ ಮತ್ತೆ 20 ಸಾವಿರ ಶಿಕ್ಷಕರ ಭರ್ತಿಗೆ ಮುಂದಾಗಿದೆ.
ಈ ವಾರದಲ್ಲಿ ಸಿಎಂಗೆ ಮನವಿ ಸಲ್ಲಿಸಲಿದ್ದಾರೆ ಮಧು ಬಂಗಾರಪ್ಪ.
13,500 ಜಿಪಿಎಸ್ಟಿಆರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆದು ಅರ್ಹತೆ ಪಡೆದಿರುವವರಿಗೆ ಆದೇಶ ಪತ್ರ ನೀಡಲು ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಈ ಪ್ರಕ್ರಿಯೆ ಈಗ ಜರೂರಾಗಿ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದೆ. ಜತೆಗೆ 20,000 ಶಿಕ್ಷಕರ ನೇಮಕಾತಿಗೆ ಹೊಸ ಅಧಿಸೂಚನೆಗೆ ಮುಂದಾಗಿದೆ ಶಿಕ್ಷಣ ಇಲಾಖೆ.
ಸರ್ಕಾರಿ ಶಾಲೆಗಳಲ್ಲಿ ಭರ್ತಿ ಮಾಡಬೇಕಾದ ಇನ್ನು 53 ಸಾವಿರ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಶಾಲೆಗಳಲ್ಲಿ ಟೀಚರ್ಗಳ ಕೊರತೆ ನೀಗಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಮತ್ತೆ 20 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲು ಸಿದ್ಧತೆ ನಡೆಸಿಕೊಂಡಿದೆ ಶಿಕ್ಷಣ ಇಲಾಖೆ.
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಒಟ್ಟು 53,000 ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲಾಗಿದೆ. ಆದರೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ಹೆಚ್ಚುವರಿಯಾಗಿ 20 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಕರ ಕೊರತೆ ನೀಗಿಸುವ ಲೆಕ್ಕಾಚಾರದಲ್ಲಿ ಇಲಾಖೆ ಇದೆ.
13,500 ಶಿಕ್ಷಕರ ನೇಮಕದ ಸ್ಥಿತಿ ಏನು?
ಈ ಹುದ್ದೆಗಳ ನೇಮಕ ಪ್ರಕ್ರಿಯೆ ಹೈಕೋರ್ಟ್ನಲ್ಲಿದ್ದು ತೀರ್ಪು ಬರುವ ತನಕ ಕಾಯಲೇಬೇಕಾದ ಅನಿವಾರ್ಯತೆ ಇದೆ. ಅತಿಥಿ ಶಿಕ್ಷಕರ ನೇಮಕ ತಾತ್ಕಾಲಿಕ ವ್ಯವಸ್ಥೆ ಆಗಿರುವುದರಿಂದ, ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಹೆಚ್ಚುವರಿ 20 ಸಾವಿರ ಶಿಕ್ಷಕರ ನೇಮಕಕ್ಕೆ ಮನವಿ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ವಾರದಲ್ಲಿಯೇ ಸಿಎಂ ಸಿದ್ಧರಾಮಯ್ಯನವರನ್ನು ಈ ಸಂಬಂಧ ಭೇಟಿ ಮಾಡಿ, 20 ಸಾವಿರ ಶಿಕ್ಷಕರ ನೇಮಕಕ್ಕೆ ಸಚಿವ ಮಧುಬಂಗಾರಪ್ಪ ಮನವಿ ಮಾಡಲಿದ್ದಾರೆ. ಬಳಿಕ ಆರ್ಥಿಕ ಇಲಾಖೆಗೆ ಅನುಮೋದನೆಗಾಗಿ ಪ್ರಸ್ತಾವನೆ ಹೋಗಲಿದೆ. ಅಲ್ಲಿ ಅನುಮತಿ ಸಿಕ್ಕ ಬಳಿಕ ನೇಮಕ ಪ್ರಕ್ರಿಯೆಗೆ ಅಧಿಕೃತ ಅಧಿಸೂಚನೆಗೆ ಸಿದ್ಧತೆ ಮಾಡಿ ಚಾಲನೆ ನೀಡಲಾಗುತ್ತದೆ.
13,500 ಶಿಕ್ಷಕರ ನೇಮಕ ಪ್ರಕ್ರಿಯೆಗೆ ತೀರ್ಪು ಬರುವ ನಿರೀಕ್ಷೆ ಇದ್ದು, ಒಂದು ವೇಳೆ ಎಲ್ಲವು ಸರಿಯಾದಲ್ಲಿ ಇದರೊಂದಿಗೆ ಹೆಚ್ಚುವರಿ 20 ಸಾವಿರ ಶಿಕ್ಷಕರನ್ನು ಸೇರಿಸಿಕೊಂಡಲ್ಲಿ ಶಿಕ್ಷಕರ ಕೊರತೆ ನೀಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಂದು ವೇಳೆ ಈ ನೇಮಕ ಅಧಿಸೂಚನೆ ಪ್ರಕಟಗೊಂಡಲ್ಲಿ ಬಿಎ, ಬಿಎಸ್ಸಿ ಪದವಿ ಜತೆಗೆ ಬಿ.ಇಡಿ ಶಿಕ್ಷಣ ಪಡೆದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ, ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಆಕಾಂಕ್ಷಿಗಳು ಇಂದಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿ.

No comments:
Post a Comment