Thursday, November 30, 2023

SSLC Annual Exam Science Subject Question Papers. Key-Answers and answer sheets of students scored OUT OF OUT are given below...

  Wisdom News       Thursday, November 30, 2023
Hedding ; SSLC Annual Exam Science Subject Question Papers. Key-Answers and answer sheets of students scored OUT OF OUT are given below...



SSLC ಪರೀಕ್ಷೆಯಲ್ಲಿ 620ಕ್ಕೂ ಹೆಚ್ಚು ಅಂಕ ಗಳಿಸಲು ಈ ಸಲಹೆಗಳನ್ನು ಫಾಲೋ ಮಾಡಿ..!



ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್‌ ಎಕ್ಸಾಮ್‌ ಮುಂದಿನ ಮಾರ್ಚ್‌ ತಿಂಗಳಾಂತ್ಯದಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ 620 ಕ್ಕೂ ಹೆಚ್ಚು ಅಂಕಗಳನ್ನು ಪಡೆಯುವ ಆಸೆ ಇದ್ದವರು, ಈ ಸಲಹೆಗಳನ್ನು ಫಾಲೋ ಮಾಡಿರಿ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್‌ ಎಕ್ಸಾಮ್‌ಗೆ ಇನ್ನು 5 ತಿಂಗಳು ಮಾತ್ರವೇ ಬಾಕಿ ಇವೆ. ದಿನಗಳು ಹೋಗುವುದು ವಿದ್ಯಾರ್ಥಿಗಳಿಗೆ ಆಗಲಿ, ಪೋಷಕರಿಗೆ ಆಗಲಿ ಅಷ್ಟು ಗಮನಕ್ಕೆ ಬರುವುದಿಲ್ಲ. ಆದರೆ ಪರೀಕ್ಷೆಗೆ ಇನ್ನೆರಡು ತಿಂಗಳು ಮಾತ್ರವೇ ಇರುವುದು ಎಂದಾಗ ಬಹುಸಂಖ್ಯಾತ ವಿದ್ಯಾರ್ಥಿಗಳು, ಎಚ್ಚೆತ್ತುಕೊಳ್ಳುವುದು ಸರ್ವೇ ಸಾಮಾನ್ಯ. ಅದರೆ ನಮ್ಮ ಇಂದಿನ ಲೇಖನದಿಂದ ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷೆ ತಯಾರಿಗೆ ಎಚ್ಚೆತ್ತುಕೊಳ್ಳುವಲ್ಲಿ ಸಂಶಯವಿಲ್ಲ ಎಂದು ಭಾವಿಸುತ್ತೇವೆ. ನೀವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 620 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಲೇಬೇಕು ಎಂದುಕೊಂಡಲ್ಲಿ ತಯಾರಿಯ ವಿಧಾನದಲ್ಲಿಯೂ ಗಮನಹರಿಸಬೇಕಾಗುತ್ತದೆ. ಸಮಯ ನಿರ್ವಹಣೆಯಲ್ಲಿಯೂ ಗಮನಹರಿಸಬೇಕಾಗುತ್ತದೆ. ಆದ್ದರಿಂದ ನೀವು ಟಾಪ್‌ ಅಂಕಗಳನ್ನು ಗಳಿಸಲು ಇಂದಿನ ಲೇಖನದ ಸಲಹೆಗಳನ್ನು ಫಾಲೋ ಮಾಡಿರಿ.

ಈಗಾಗಲೇ ಎಸ್‌ಎಸ್ಎಲ್‌ಸಿ ತರಗತಿ ಬೋಧನೆಗೆ ಅರ್ಧವರ್ಷ ಕಳೆದಿದೆ. ಇಷ್ಟು ದಿನ ನೀವು ಪಡೆದ ಬೋಧನೆಯಲ್ಲಿ ಏನೆಲ್ಲ ಪಠ್ಯಕ್ರಮ (ಅಧ್ಯಾಯಗಳು, ಪದ್ಯಗಳು) ಇದೆ ಎಂದು ನೆನೆಸಿಕೊಂಡಲ್ಲಿ, ಎಷ್ಟೋ ವಿಷಯಗಳು ಮರೆತಿರಬಹುದು. ಆದ್ದರಿಂದ ಒಮ್ಮೆ ಎಲ್ಲ ವಿಷಯಗಳ ಪಠ್ಯಕ್ರಮಗಳನ್ನು ಆಗಾಗ ಓದಿಕೊಳ್ಳಿ. ನೀವು ಆ ಅಧ್ಯಾಯಗಳ ಹೆಸರಿನ ಮೇಲೆ ಕಣ್ಣಾಡಿಸಿದಾಗಲೆಲ್ಲ, ಆ ಪಠ್ಯದ ಬೋಧನೆ, ವಿಷಯಗಳೆಲ್ಲ ಒಮ್ಮೆ ನಿಮಗೆ ನೆನಪಿಗೆ ಬರಬೇಕು. ಆಗ ಮಾತ್ರ ನಿಮ್ಮ ಅಧ್ಯಯನ, ಓದು ಪರಿಣಾಮಕಾರಿಯಾಗಿದೆ ಎಂದರ್ಥ. ಒಂದು ವೇಳೆ ನೆನಪಿಗೆ ಬರದಲ್ಲಿ ಸರಿಯಾಗಿ ಓದಿಕೊಂಡಿಲ್ಲ ಎಂದರ್ಥ.

ಶಿಕ್ಷಕರು ಎಲ್ಲ ಪಠ್ಯಗಳನ್ನು ಪಾಠ ಮಾಡಿ ಮುಗಿಸಲಿ, ಆನಂತರದಲ್ಲಿ ಒಂದು ಕಡೆಯಿಂದ ನೋಟ್ಸ್‌ ಓದಿಕೊಳ್ಳೋಣ ಎಂದು ಕಾಯದಿರಿ. ಈಗಾಗಲೇ ನೀವು ಕೇಳಿರುವ ಪಾಠಗಳನ್ನು, ಪಡೆದಿರುವ ನೋಟ್ಸ್‌ಗಳನ್ನು ಓದಲು ಇಂದಿನಿಂದಲೇ ಆರಂಭಿಸಿ. ಪರೀಕ್ಷೆಗೆ ಹೆಚ್ಚು ದಿನಗಳಿವೆ ಎಂದು ತಯಾರಿ ಮುಂದೂಡಬೇಡಿ.

ನೀವು ಕನ್ನಡ ಮಾಧ್ಯಮದಲ್ಲೇ ಓದುವವರಾಗಿರಿ ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲೇ ಓದುವವರಾಗಿರಿ. ಆದರೆ ಗಣಿತ, ಇಂಗ್ಲಿಷ್, ವಿಜ್ಞಾನ ವಿಷಯಗಳಿಗೆ ಹೆಚ್ಚು ಒತ್ತು ನೀಡಿ ಓದುವುದು ಸೂಕ್ತ. ಕಾರಣ ಗಣಿತ ಹಾಗೂ ವಿಜ್ಞಾನದಲ್ಲಿ ಲೆಕ್ಕ, ಸೂತ್ರಗಳು, ಸಮೀಕರಣಗಳು, ಬಿಡಿಸಬೇಕಾದ ಸಮಸ್ಯೆಗಳು ತೀರ ಇರುತ್ತವೆ. ಇವುಗಳನ್ನು ಅಭ್ಯಾಸ ಮಾಡದೇ ಸುಮ್ಮನೇ ಓದಿದರೆ ಖಂಡಿತ ನೆನಪಿಗೆ ಬರುವುದಿಲ್ಲ. ಇಂಗ್ಲಿಷ್‌ನಲ್ಲೂ ಹಾಗೆಯೇ. ನೀವು ಓದುವ ಜತೆಗೆ- ವ್ಯಾಕರಣ, ಲೆಟರ್‌ ರೈಟಿಂಗ್, ಪ್ಯಾಸೇಜ್‌, ಇವುಗಳನ್ನು ಬರೆದು ಬರೆದು ಕಲಿಯಬೇಕಾಗಿದೆ. ಅಲ್ಲದೇ ಕರ್ನಾಟಕ ಅಭ್ಯರ್ಥಿಗಳಂತು ಅದರಲ್ಲೂ ಗ್ರಾಮೀಣ ಭಾಗದವರು ಇಂಗ್ಲಿಷ್‌ ಪದಗಳ ಅರ್ಥಗಳನ್ನು ತಿಳಿದು ಹೆಚ್ಚು ಕಲಿಯಬೇಕಾಗಿರುತ್ತದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ವಿಷಯಗಳಿಗೂ ಸಹ ಗೈಡ್ ಎಂದು ಖರೀದಿಗೆ ಲಭ್ಯವಿದೆ. ಆದರೆ ಮೊದಲು ನೀವು ಹೆಚ್ಚು ಬೋರ್ಡ್‌ ನಿಗದಿಪಡಿಸಿರುವ ಪಠ್ಯ ಪುಸ್ತಕದ ಮೇಲೆ ಅವಲಂಭಿತರಾಗಿರಬೇಕು. ಅದನ್ನೇ ಹೆಚ್ಚು ಓದಿಕೊಳ್ಳಬೇಕು. ಇದರಲ್ಲಿ ನೀಡುವ ಅಭ್ಯಾಸಗಳನ್ನು ಮಾಡುವುದು ಉತ್ತಮ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮದ ಮೇಲೆ ಹೆಚ್ಚು ಗಮನಹರಿಸಿ ಓದಬೇಕು. ಇದರ ಆಧಾರದಲ್ಲಿಯೇ ಪ್ರಶ್ನೆಗಳನ್ನು ಕೇಳುತ್ತಾರೆ ಎನ್ನುವುದನ್ನು ಮರೆಯದಿರಿ.

ಎಷ್ಟು ಸಾಧ್ಯವೋ ಅಷ್ಟು ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿ. ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಹೆಚ್ಚು ಬಿಡಿಸುವುದರಿಂದ ನಿಮ್ಮ ನೆನಪಿನ ಶಕ್ತಿ, ನೀವು ಓದಿರುವ ವಿಷಯಗಳು ಎಷ್ಟು ನೆನಪಿದೆ, ಯಾವುದು ಅತಿ ಮುಖ್ಯ ಈ ಎಲ್ಲದಕ್ಕೂ ಉತ್ತರಗಳನ್ನು ಕಂಡುಕೊಳ್ಳಬಹುದಾಗಿದೆ.

ನಿಮ್ಮ ಶಿಕ್ಷಕರು ಹೇಳಿದ ಹಾಗೂ ಪ್ರಶ್ನೆ ಪತ್ರಿಕೆಗಳಿಂದ ತಿಳಿದ ಅತಿ ಮುಖ್ಯ ಟಾಪಿಕ್‌ಗಳನ್ನು ಹೆಚ್ಚು ಬಾರಿ ಕೇವಲ ಓದುವುದಕ್ಕಿಂತ, ಬರೆದು ಬರೆದು ಕಲಿಯಿರಿ. ಆಗ ಮಾತ್ರ ಬೇಗ ನೆನಪಿಗೆ ಬರುತ್ತದೆ. ಕೇವಲ ಕಂಠಪಾಠಕ್ಕೆ ಸೀಮಿತವಾಗಬೇಡಿ. ಬರೆದು ಕಲಿಯುವುದರಿಂದ ಕೇವಲ ಪರೀಕ್ಷೆಗೆ ಮಾತ್ರವಲ್ಲದೇ ನಂತರವು ಸಹ ನಿಮ್ಮ ನೆನಪಿನಲ್ಲಿ ಈ ವಿಷಯಗಳಿರುತ್ತವೆ. ಉನ್ನತ ಶಿಕ್ಷಣದಲ್ಲಿ ಈ ಜ್ಞಾನ ಸಹಾಯವಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂಕಗಳು ನಿಮ್ಮ ಮುಂದಿನ ವಿದ್ಯಾಭ್ಯಾಸದ ಮೇಲೆ ಹೆಚ್ಚು ಪರಿಣಾಮ ಬೀರುತ್ತವೆ. ಆಯ್ಕೆ ಮಾಡುವ ವಿಷಯದಿಂದ ಹಿಡಿದು ಕಾಲೇಜಿನವರೆಗೆ, ಆರ್ಥಿಕ ವ್ಯವಸ್ಥೆಯ ಮೇಲೆ ಎಲ್ಲದರ ಮೇಲೂ ಪರಿಣಾಮ ಬೀರುತ್ತವೆ. ಆದ್ದರಿಂದ ಬಹುಮುಖ್ಯ ಗ್ರೌಂಡ್‌ವರ್ಕ್‌ ಎಂದರೆ ಉತ್ತಮ ಪ್ಲಾನ್‌ ಮಾಡಿ ಓದುವುದಾಗಿದೆ. ಅದರಲ್ಲಿ ಪರೀಕ್ಷೆಗೆ ಒಂದೆರಡು ತಿಂಗಳು ಮುಂಚೆಯೇ ಪಠ್ಯಕ್ರಮದ ಎಲ್ಲ ಅಧ್ಯಾಯಗಳನ್ನು ಓದಿ, ಕಲಿತು ಮುಗಿಸುವುದು. ಈ ಓದಿನ ನಡುವೆ ಶಾಂತವಾಗಿ, ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಓದಿರಿ. ಜತೆಗೆ ವಿಶ್ರಾಂತಿ ಪಡೆದು ಓದಿರಿ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೀವು ಹೆಚ್ಚು ಅಂಕಗಳಿಸಬೇಕು ಎಂದಲ್ಲಿ, ನಿಮ್ಮ ಪರಿಶ್ರಮಕ್ಕೆ ತಕ್ಕ ಫಲಿತಾಂಶ ಬೇಕು ಎಂದಲ್ಲಿ, ಓದುವ ಸ್ಥಳದ ಆಯ್ಕೆಯೂ ಬಹುಮುಖ್ಯ. ಆ ಸ್ಥಳ ನಿಶಬ್ಧವಾಗಿರಲಿ. ನೀವು ಓದುವಾಗ ಯಾರು ಸಹ ಆಗಾಗ ನಿಮ್ಮನ್ನು ಮಾತನಾಡಿಸಿ ತೊಂದರೆ ಕೊಡುವ ಸ್ಥಳ ಇದಾಗಿರಬಾರದು. ಅಲ್ಲದೇ ಓದುವ ಸ್ಥಳದಲ್ಲಿ ಬುಕ್‌ಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಿ. ಆ ಪ್ರದೇಶಕ್ಕೆ ನೀವು ಸದಾ ಹೋಗಬೇಕು ಎನಿಸುವಷ್ಟು ಪ್ರಶಾಂತ ಸ್ಥಳ, ಶುಚಿಯಾದ ಸ್ಥಳ, ವ್ಯವಸ್ಥಿತ ಸ್ಥಳ ಆದಾಗಿರಲಿ.

ನೀವು ಪರೀಕ್ಷೆ ಬರೆಯಲಿರುವ ಪ್ರತಿ ಪತ್ರಿಕೆಗೆ ಸಮಯ ನಿಗದಿಪಡಿಸಿ. ನಿಮಗೆ ಹೆಚ್ಚು ಕಷ್ಟ ಎನಿಸುವ ವಿಷಯಗಳಿಗೆ ಹೆಚ್ಚು ಸಮಯ ನಿಗದಿಪಡಿಸಿ ಓದಿರಿ. ಸೂಕ್ತ ಟೈಮ್‌ ಟೇಬಲ್‌ ಹಾಕಿಕೊಂಡು ಓದಿರಿ. ಕಷ್ಟ ಎನಿಸುವ ಟಾಪಿಕ್‌ಗಳನ್ನು, ಅರ್ಥವಾಗದ ಟಾಪಿಕ್‌ಗಳನ್ನು ಶಿಕ್ಷಕರಲ್ಲಿ, ಸಹಪಾಠಿಗಳಲ್ಲಿ ಕೇಳಿ ತಿಳಿದುಕೊಳ್ಳಿ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 620 ಕ್ಕೂ ಹೆಚ್ಚು ಅಂಕಗಳಿಸುವ ನಿಮ್ಮ ಗುರಿಗೆ, ನಿಮ್ಮ ಸ್ವಯಂ ಅಧ್ಯಯನ ಮಾರ್ಗವೇ ಅಂತಿಮ ಪರಿಹಾರ ಹಾಗೂ ಮಾರ್ಗೋಪಾಯಗಳು. ಅಂದರೆ ನಿಮ್ಮ ಅಧ್ಯಯನ ತಂತ್ರಗಾರಿಕೆ, ನೀವು ನೀಡುವ ಸಮಯ, ನೀವು ಓದುವ ವಿಧಾನ, ಇವುಗಳೇ ನಿಮಗೆ ಪರಿಹಾರಗಳು. ಇವು ಬಿಟ್ಟು ಬೇರೆ ಯಾವುದೇ ಸುಲಭ ಮಾರ್ಗ ಹೆಚ್ಚು ಅಂಕಗಳಿಸಲು ಇಲ್ಲ. ಆದ್ದರಿಂದ ಪ್ರತಿ ದಿನವು ಸಹ ನಿಮ್ಮ ಸಣ್ಣ ಸಣ್ಣ ಗುರಿಗಳನ್ನು ತಲುಪಿ, ಉತ್ತಮವಾಗಿ ಪರೀಕ್ಷೆಗೆ ಸಿದ್ಧತೆ ನಡೆಸಬೇಕಾಗಿದೆ.

ಪರೀಕ್ಷೆಗೆ ಕನಿಷ್ಠ ಇನ್ನೊಂದೆ ತಿಂಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ನೀವು ಓದಿದ, ಕಲಿತ ಎಲ್ಲವನ್ನು ಪುನರಾವರ್ತನೆ ಮಾಡಬೇಕು. ಓದಿದನ್ನು ಪುನರಾವರ್ತನೆ ಮಾಡದಿದ್ದಲ್ಲಿ ಅದೆಷ್ಟೋ ವಿಷಯಗಳು ಮರೆತು ಹೋಗುತ್ತವೆ. ಈ ಸಂದರ್ಭದಲ್ಲಿ ಸಂಶಯಗಳು ಇರುವ ಟಾಪಿಕ್‌ಗಳು ಸಿಗುತ್ತವೆ. ಅವುಗಳನ್ನು ಸಹ ಕ್ಲಿಯರ್‌ ಮಾಡಿಕೊಳ್ಳಲು ಈ ಪುನರಾವರ್ತನೆ ಸಹಾಯವಾಗುತ್ತದೆ. ಪುನರಾವರ್ತನೆಗೆ ಸಮಯ ನೀಡುವುದನ್ನು ಯಾರು ಸಹ ಮಿಸ್‌ ಮಾಡಲೇಬಾರದು.

ಈ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಮಾರ್ಚ್ 31 ರಿಂದ ಏಪ್ರಿಲ್ 15, 2023 ರವರೆಗೆ ನಡೆಯಿತು. ಕರ್ನಾಟಕ SSLC ಉತ್ತರ ಕೀಗಳನ್ನು ಏಪ್ರಿಲ್ 17, 2023 ರಂದು ಪ್ರಕಟಿಸಲಾಗಿದೆ. ಕರ್ನಾಟಕ SSLC ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21, 2023 ರಂದು ಪ್ರಾರಂಭವಾಯಿತು. ಕೆಳಗಿನ ಎಲ್ಲಾ ಇತ್ತೀಚಿನ ನವೀಕರಣಗಳನ್ನು ಅನುಸರಿಸಿ.

SSLC Exam 2023 : SSLC ಪೂರ್ವ ಸಿದ್ಧತಾ ಪರೀಕ್ಷೆ ಯಾವಾಗ? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

SSLC Preparatory Exam 2023 : 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಕೇವಲ ಎಂಟು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ಈಗಿನಿಂದಲೇ ಆರಂಭಿಸಿಕೊಳ್ಳಿ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ತಪ್ಪಿಸದೆ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಹಾಜರಾಗಿ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಈಗಾಗಲೇ 2022-23ನೇ ಸಾಲಿನ ಎಸ್‌ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಲು ಮಂಡಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

ಮಂಡಲಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆಬ್ರುವರಿ 22,2023 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 01, 2023ಕ್ಕೆ ಪರೀಕ್ಷೆಗಳು ಮುಕ್ತಾಯವಾಗಲಿದೆ.

ಇನ್ನು 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಕೇವಲ ಎಂಟು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ಈಗಿನಿಂದಲೇ ಆರಂಭಿಸಿಕೊಳ್ಳಿ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ತಪ್ಪಿಸದೆ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಹಾಜರಾಗಿ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿರುವ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ..
ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ದಿನಾಂಕ - 23-02-2023.
ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ ದಿನಾಂಕ- 24-02-2023.
ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ ದಿನಾಂಕ - 25-02-2023.
26-02-2023 - ಭಾನುವಾರ ರಜಾ ದಿನ.
ಗಣಿತ ದಿನಾಂಕ - 27-02-2023.
ವಿಜ್ಞಾನ ದಿನಾಂಕ - 28-02-2023.
ಸಮಾಜ ದಿನಾಂಕ - 01-02-2023.

ಈಗಾಗಲೇ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪಠ್ಯ ಮುಗಿದ ಕಾರಣ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಈ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳಬೇಡಿ. ಮುಖ್ಯ ಪರೀಕ್ಷೆಗೆ ನಡೆಸುವ ತಾಲಿಮು ಇದು. ಇಲ್ಲಿ ನೀವು ನಿಮ್ಮ ತಪ್ಪುಗಳನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ.

ವರ್ಷವಿಡಿ ಅಧ್ಯಯನ ಮಾಡಿ ಒಂದು ಹಂತಕ್ಕೆ ಬಂದಿರುವ ಸಮಯವಿದು. ಈ ಸಮಯ ನಿಮ್ಮ ಜೀವನವನ್ನು ರೂಪಿಸಿಕೊಳ್ಳಲು ಉತ್ತಮವಾದ ಆಯ್ಕೆಯಾಗಿದೆ. ಎಷ್ಟೋ ಜನರು ಈ ಅವಧಿಯನ್ನು ಚೆನ್ನಾಗಿ ಬಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಗೆದ್ದವರು ತುಂಬಾ ಜನ ಇದ್ದಾರೆ. ಹಾಗಾಗಿ ಬೇರೆ ಯಾವುದೇ ವಿಚಾರಕ್ಕೆ ಸಮಯ ವ್ಯರ್ಥ ಮಾಡದೇ ಕೇವಲ ಪರೀಕ್ಷೆ ದೃಷ್ಟಿಯಿಂದ ಅಧ್ಯಯನ ಮಾಡಿ ಸಮಯವನ್ನು ಬಳಸಿಕೊಳ್ಳಿ. ಪರೀಕ್ಷೆಗೆ ಕಡಿಮೆ ಸಮಯ ಉಳಿದಿರುವ ಕಾರಣ, ಈ ಸಮಯದ ಪ್ರಾಮಾಣಿಕ ಅಧ್ಯಯನ ಮಾಡಿ ಪರೀಕ್ಷೆಗೆ ತಯಾರಾಗಿ.

Preparatory Exam: SSLC ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ದಿನಾಂಕ ಪ್ರಕಟ; ಇಲ್ಲಿದೆ ಮಹತ್ವದ ಮಾಹಿತಿ
ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಈಗಾಗಲೇ ಹತ್ತನೇ ತರಗತಿ ವಿದ್ಯಾರ್ಥಿಗಳ ಫೈನಲ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಗೊಂಡಿದೆ. ವಿದ್ಯಾರ್ಥಿಗಳೆಲ್ಲಾ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆಯೇ ಮತ್ತೊಂದು ಮಹತ್ತರ ಮಾಹಿತಿ ಇದೆ ಗಮನಿಸಿ.

ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂದು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಕೂಡಾ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ ಗಮನಿಸಿ.

ಈ ಬಾರಿ ಇದೇ ತಿಂಗಳು ಅಂದರೆ ಫೆಬ್ರವರಿ 23 ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.

ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು),

27ರಂದು ಗಣಿತ, 28ರಂದು ವಿಜ್ಞಾನ, ಮಾರ್ಚ್‌ 1ರಂದು ಸಮಾಜ ವಿಜ್ಞಾನ ತಲಾ 80 ಅಂಕಗಳ ಪರೀಕ್ಷೆಗಳು ನಡೆಯಲಿವೆ. ಎಲ್ಲ ಪರೀಕ್ಷೆಗಳನ್ನೂ ಪ್ರತಿದಿನ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಸಬೇಕು ಎಂದು ಸೂಚನೆ ಬಿಡುಗಡೆ ಮಾಡಲಾಗಿದೆ.

ಜೆಟಿಎಸ್‌ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

ಎಸ್‌ಎಸ್‌ಎಲ್‌ಸಿಯ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು (SSLC Exam 2023) ನಡೆಸಲು ಶಾಲೆಗಳು ಸಿದ್ಧತೆ ನಡೆಸಿರುವಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಪರೀಕ್ಷೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದು, ಮುಖ್ಯವಾಗಿ ರಾಜ್ಯ ಮಟ್ಟದಲ್ಲಿ ಈ ಬಾರಿ ಪ್ರಶ್ನೆ ಪತ್ರಿಕೆ ಸಿದ್ಧವಾಗಲಿದೆ. ಅಲ್ಲದೆ, ಪರೀಕ್ಷಾ ಶುಲ್ಕವನ್ನು 10 ರೂ. ಇಳಿಸಲಾಗಿದೆ.

ಈ ಪರೀಕ್ಷೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದಕ್ಕೆ ಬದಲಾಗಿ ಈ ಬಾರಿ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ರಾಜ್ಯಮಟ್ಟದಲ್ಲಿಯೇ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವುದಾಗಿಯೂ ಇಲಾಖೆ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (kseeb) ಪೂರ್ವ ಸಿದ್ಧತಾ ಪರೀಕ್ಷೆಗೂ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಕಳುಹಿಸಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದನ್ನು ಮುದ್ರಿಸಿ, ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಶಾಲೆಗಳಿಗೆ ತಲುಪಿಸಲಿದ್ದಾರೆ.

ಈ ಹಿಂದೆಯೇ ಮಂಡಳಿಯೇ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸುವ ಪ್ರಸ್ತಾಪ ಇತ್ತಾದರೂ, ಪ್ರಶ್ನೆ ಪತ್ರಿಕೆಯನ್ನು ಶಾಲೆಗಳಿಗೆ ತಲುಪಿಸುವುದು ಕಷ್ಟ ಎಂಬ ಕಾರಣಕ್ಕೆ ಮಂಡಳಿಯು ಈ ನಿರ್ಧಾರದಿಂದ ಹಿಂದೆ ಸರಿದಿತ್ತು. ಆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಒದಗಿಸುವ ಪ್ಲಾನ್‌ ಅನ್ನು ಈಗ ಮಂಡಳಿ ಮಾಡಿದೆ. ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಈ ಮೊದಲು ಇದೇ ರೀತಿಯಾಗಿ ರಾಜ್ಯಮಟ್ಟದಲ್ಲಿ ಪೂರ್ವಸಿದ್ಧತಾ ಪರೀಕ್ಷೆ ನಡೆಸುವ ಪ್ರಯತ್ನ ನಡೆಸಿತ್ತು. ಆದರೆ ಅದಕ್ಕೆ ಇಲಾಖೆ ಅನುಮತಿ ನೀಡಿರಲಿಲ್ಲ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದಕ್ಕೆ ಆಗುತ್ತಿದ್ದ ಮಾನವ ಸಂಪನ್ಮೂಲದ ವಿನಿಯೋಗ ಇದರಿಂದ ತಪ್ಪಲಿದೆ. ಈ ಬಾರಿ ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಒಂದೇ ರೀತಿಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇರಲಿದ್ದು, ಮುಖ್ಯ ಪರೀಕ್ಷೆಯ ಸಿದ್ಧತೆಗೆ ಅನುಕೂಲವಾಗಲಿದೆ.

ಪೂರ್ವಸಿದ್ಧತಾ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಪೂರ್ವಸಿದ್ಧತಾ ಪರೀಕ್ಷೆಗೆ 60 ರೂ. ಶುಲ್ಕ ವಿಧಿಸುವಂತೆ ಶಿಕ್ಷಣ ಇಲಾಖೆಯು ಈ ಹಿಂದೆ ಸೂಚಿಸಿತ್ತು. ಈಗ ಇದನ್ನು 50 ರೂ.ಗಳಿಗೆ ಇಳಿಸಲಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರ ಸೂಚನೆ ಮೇರೆಗೆ ಪೂರ್ವಸಿದ್ಧತಾ ಪರೀಕ್ಷೆಯ ಶುಲ್ಕವನ್ನು ಕಡಿಮೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಎಸ್‌ಎಸ್‌ಎಲ್‌ಸಿಯ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಫೆಬ್ರವರಿ 23 ರಿಂದ ಮಾರ್ಚ್‌ 1ರ ವರೆಗೆ ನಡೆಸಲಾಗುತ್ತದೆ. ಈಗಾಗಲೇ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

logoblog

Thanks for reading SSLC Annual Exam Science Subject Question Papers. Key-Answers and answer sheets of students scored OUT OF OUT are given below...

Previous
« Prev Post

No comments:

Post a Comment