ಪಾಠದ ಹೆಸರು : ನೀರು ಕೊಡದ ನಾಡಿನಲ್ಲಿ
ಕೃತಿಕಾರರ ಹೆಸರು : ನೇಮಿಚಂದ್ರ
ಶ್ರೀಮತಿ ನೇಮಿಚಂದ್ರ ಅವರು ಜುಲೈ 16 1959 ರಂದು ಚಿತ್ರದುರ್ಗದಲ್ಲಿ ಜಿ ಗುಂಡಪ್ಪ ಮತ್ತು ತಿಮ್ಮಕ್ಕನವರ ದಂಪತಿಗಳ ಮಗಳಾಗಿ ಜನಿಸಿದರು. ಕನ್ನಡದಲ್ಲಿ ಚಿಂತನ ಪೂರ್ಣ ಲೇಖನ, ಪುಸ್ತಕಗಳನ್ನು ಬರೆಯುತ್ತಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಯಾದ್ ವಶೇಮ್ – ಕಾದಂಬರಿ, ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಮತ್ತೇ ಬರೆದ ಕಥೆಗಳು, ನೇಮಿಚಂದ್ರರ ಕಥೆಗಳು ಮುಂತಾದ ಕಥಾಸಂಕಲನಗಳು. ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ – ಪ್ರವಾಸ ಕಥನಗಳು. ಬದುಕು ಬದಲಿಸಬಹುದು ಅಂಕಣ ಬರಹಗಳು, ಇತ್ಯಾದಿ ಪೆರುವಿನ ಪವಿತ್ರ ಕಣಿವೆಯಲ್ಲಿ ಕೃತಿಗೆ ‘ಕರ್ನಾಟಕ ಸಾಹಿತ್ಯ ಪ್ರಶಸ್ತಿ’ ನೃಪತುಂಗ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿಗಳು ಸಂದಿವೆ. ಪ್ರಸ್ತುತ ‘ನೀರು ಕೊಡದ ನಾಡಿನಲ್ಲಿ’ ಅಂಕಣ ಬರೆಹವನ್ನು ಶ್ರೀಮತಿ ನೇಮಿಚಂದ್ರ ಅವರ ‘ಬದುಕು ಬದಲಿಸಬಹುದು’ ಕೃತಿಯಿಂದ ಆಯ್ದು ಸಂಪಾದಿಸಿ ನಿಗದಿಪಡಿಸಿದೆ.
ಆಶಯ ಭಾವ
ವಿಶ್ವದ ಜಾಗತೀಕರಣದ ಹೊಡೆತಕ್ಕೆ ಸಿಲುಕಿದ ನಮ್ಮ ನಗರಗಳಿಂದು ಕೊಳ್ಳುಬಾಕತನವನ್ನು, ಲಾಭಕೋರತನವನ್ನು ಹುಟ್ಟುಹಾಕಿ ವಿಶ್ವದ ಮಾರುಕಟ್ಟೆಯಾಗಲು ಹೊರಟಿರುವುದು ಬಲು ಅಪಾಯಕಾರಿ ಎಂಬ ವೈಚಾರಿಕ ಚಿಂತನೆಯನ್ನು ಹಾಗೂ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಕಾಪಾಡಿಕೊಳ್ಳುವ ಅನಿವಾರ್ಯತೆಯನ್ನು “ನೀರು ಕೊಡದ ನಾಡಿನಲ್ಲಿ” ಈ ಗದ್ಯಭಾಗದಲ್ಲಿ ಅತ್ಯುತ್ತಮವಾಗಿ ಚಿತ್ರಿಸಿದೆ.
ಪದಗಳ ಅರ್ಥ
ಅಗ್ಗ – ಕಡಿಮೆ
ಬೆಲೆ; ಅಲೆ – ಸುತ್ತಾಡು;
ಜನಪ್ರಿಯ – ಪ್ರಸಿದ್ಧ, ಖ್ಯಾತಿಪಡೆದ;
ಅಸ್ತ್ರ – ಆಯುಧ;
ಮಣ – ಹೆಚ್ಚು ತೂಕವಾದ;
ಮಾಲೀಕ – ಯಜಮಾನ;
ಹಿಂಜರಿಕೆ – ಹಿಂದೆ ಸರಿ,
ಹೊಕ್ಕು – ಒಳಗೆ ಹೋಗು.
ಮರುಳು – ಹುಚ್ಚುತನ;
ಕೀಳರಿಮೆ; ಹುನ್ನಾರ – ಸಂಚು;
ಅ. ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.
1. ಎಲ್ಲೆಲ್ಲಿ ನೀರು ಕೊಡುವ ಸಂಪ್ರದಾಯವಿಲ್ಲ?
ಉತ್ತರ : ಯುರೋಪ್ ರಾಷ್ಟ್ರಗಳಲ್ಲಿ , ಅಮೇರಿಕಾದಲ್ಲಿ ಎಲ್ಲಿಯೂ ನೀರು ಕೊಡುವ ಸಂಪ್ರದಾಯವಿಲ್ಲ.
2. ಮನೆಗೆ ಬಂದವರನ್ನು ಹೇಗೆ ಸತ್ಕರಿಸುವ ಸಂಪ್ರದಾಯ ನಮ್ಮಲ್ಲಿದೆ?
ಉತ್ತರ : ಮನೆಗೆ ಬಂದವರನ್ನು ತಣ್ಣನೆಯ ನೀರು ತಂದು ಕೊಟ್ಟು ಉಪಚರಿಸುವ ಅಥವಾ ಸತ್ಕರಿಸುವ
ಸಂಪ್ರದಾಯ ನಮ್ಮಲ್ಲಿದೆ.
3. ವಿದೇಶಗಳಲ್ಲಿ ನೀರಿಗಿಂತ ಅಗ್ಗವಾಗಿ ಸಿಗುವುದೇನು?
ಉತ್ತರ : ವಿದೇಶಗಳಲ್ಲಿ ನೀರಿಗಿಂತ ಅಗ್ಗವಾಗಿ ಸಿಗುವುದು ಕೋಲಾ.
4. ಭಾರತದಲ್ಲಿ ಇತ್ತೀಚೆಗೆ ಯಾವ ಹುನ್ನಾರ ನಡೆದಿದೆ?
ಉತ್ತರ : ಭಾರತದಲ್ಲಿ ಇತ್ತೀಚೆಗೆ ಬಾಟಲಿಯಲ್ಲಿ ನೀರನ್ನು ಕೊಂಡು ಕುಡಿಯುವ ಹುನ್ನಾರ ನಡೆದಿದೆ.
5. ಸರ್ವರಿಗೂ ವೇದ್ಯವಾಗಿರುವ ಅಂಶಗಳಾವುವು?
ಉತ್ತರ : ಮದರ್ಸ್ಡೇ, ಫಾದರ್ಸ್ಡೇ,ವ್ಯಾ ಲೆಂಟೇನ್ಡೇ ಆಚರಣೆಯಲ್ಲಿ ಗಿಫ್ಟ್, ಗ್ರೀಟಿಂಗ್ ಕಾರ್ಡ್ಮಾರಾಟ ಮಾಡುವ ಹೊಸ ಹುನ್ನಾರ ಎಂಬ ಅಂಶಗಳು ಸರ್ವರಿಗೂ ವೇದ್ಯವಾಗಿದೆ
6. ಲೇಖಕಿಗೆ ಹೋಟೆಲ್ನಲ್ಲಿ ನಾಲ್ಕು ಲೋಟ ನೀರು ತಂದಿಟ್ಟಾಗ ಆದ ಅನುಭವವೇನು?
ಉತ್ತರ : ಲೇಖಕಿಗೆ ಹೋಟೆಲ್ನಲ್ಲಿ ನಾಲ್ಕು ಲೋಟ ನೀರು ತಂದಿಟ್ಟಾಗ ಬರಿ ಬಾಯಲ್ಲ , ಮನಸ್ಸು ಕೂಡ
ತಂಪಾದ ಅನುಭವಾಯಿತು.
ಆ ) ಕೊಟ್ಟಿರುವ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯಗಳಲ್ಲಿ ಉತ್ತರಿಸಿ.
1. ವಿದೇಶಗಳಲ್ಲಿ ಬಾಯಾರಿಕೆಗೆ ಧಾರಾಳವಾಗಿ ಏನೇನು ದೊರೆಯುವವು?
ಉತ್ತರ : ನಮ್ಮ ದೇಶದಲ್ಲಿ ಸಿಗುವಂತೆ ಬಾಯಾರಿಕೆಯಾದಾಗ ನೀರು ಸಿಗುವುದಿಲ್ಲ. ಮತ್ತು ನೀರು ಕೊಡುವ
ಸಂಪ್ರದಾಯವಿಲ್ಲ. ವಿದೇಶಗಳಲ್ಲಿ ಬಾಯಾರಿಕೆಗೆ ಕೋಲಾಗಳು, ಫ್ರೆಂಚ್ ವೈನ್, ಬಿಯರ್, ಬಾಟಲಿಯಲ್ಲಿ ಹಣ್ಣಿನ ರಸ ಧಾರಾಳವಾಗಿ ದೊರೆಯುತ್ತವೆ.
2. ಗುರುದ್ವಾರಗಳ ಬಳಿ ಸ್ವಯಂ ಸೇವಕರು ಏನು ಮಾಡುತ್ತಿದ್ದರು?
ಉತ್ತರ : ಲೇಖಕಿಯವರು ವಿದೇಶಕ್ಕೆ ಹೋಗಲು ದೆಹಲಿಗೆ ಬಂದಿದ್ದರು. ರೋತಕ್ ರಸ್ತೆಯ ಅವರ ಅತ್ತೆಯ
ಮನೆಗೆ ಹೋಗುವಾಗ ಗುರುದ್ವಾರಗಳ ಬಳಿ ನೀರಿನ ದೊಡ್ಡ ಕೊಳಾಯಿ ಹಿಡಿದು ನಿಲ್ಲಿಸಿದ ಆಟೋ, ಬಸ್ ಹಾಗೂ ದಾರಿಹೋಕರಿಗೆಲ್ಲ ನೀರು ತುಂಬಿ ತುಂಬಿ ಕುಡಿಸುತ್ತಿದ್ದರು.
3. ಕೋಲಾಗಳ ಆಸೆಯಿಂದ ನಾವು ಏನೆಲ್ಲವನ್ನು ತೊರೆಯುತ್ತಿದ್ದೇವೆ?
ಉತ್ತರ : ಕೋಲಾಗಳ ಆಸೆಯಿಂದ ನಾವು ಮುಖ್ಯವಾಗಿ ನೀರು ಕುಡಿಯುವುದನ್ನೇ ತೊರೆಯುತ್ತಿದ್ದೇವೆ.
ಏಕೆಂದರೆ ಕೋಲಾಗಿಂತ ನೀರಿಗೆ ಹೆಚ್ಚು ಬೆಲೆ ಕೊಡಬೇಕು. ಅದರೊಂದಿಗೆ ರುಚಿಯಾದ ಮಜ್ಜಿಗೆ ಪಾನಕ,
ಎಳನೀರು ಪಾನಕ ಕಬ್ಬಿನಹಾಲು, ತಾಜಾ ಹಣ್ಣನ ರಸ ಎಲ್ಲವನ್ನು ತೊರೆದ ಕೋಲಾಗಳಿಗೆ ಮುಗಿ
ಬೀಳುತ್ತಿದ್ದಾರೆ.
4. ನಾಗರೀಕತೆಯ ದೊಡ್ಡ ಅನಾಹುತಗಳಾಗಿ ಕಾಣಿಸಿಕೊಳ್ಳುತ್ತಿರುವ ಆಚರಣೆಗಳಾವುವು?
ಉತ್ತರ : ಕೊಳ್ಳುಬಾಕತನ, ಲಾಭಕೋರತನದ ರೋಗಗಳು ಸಾಂಕ್ರಾಮಿಕವಾಗಿ ಎಲ್ಲ ಕಡೆಯೂ ಹರಡಿ ,
ಭಾರತಕ್ಕೂ ಲಗ್ಗೆ ಇಟ್ಟು ‘ಸಂಸ್ಕೃತಿಯ ಮೇಲೆ ದಾಳಿ’ ಮಾಡುತ್ತಿವೆ. ನಾಗರಿಕತೆ ಸಂಸ್ಕೃತಿಯ ದಾಳಿಯಿಂದ
ಮದರ್ಸ್ ಡೇ, ಫಾದರ್ಸ್ ಡೇ, ವ್ಯಾಲೇಂಟೈನ್ ಡೇ ಆಚರಿಸುವುದು ಪ್ರೀತಿಯ ದ್ಯೋತಕದಿಂದ ಅಲ್ಲ. ಗಿಫ್ಟ್,
ಗ್ರೀಟಿಂಗ್ ಕಾರ್ಡ್, ಮಾರುವ ಹೊಸ ಹುನ್ನಾರಕ್ಕಾಗಿ ಈ ಆಚರಣೆ ಲಾಭಕೋರತನ ಇದರ ಮುಖ್ಯ
ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ಮಾರುಕಟ್ಟೆಗೆ ಬಂದ ವಸ್ತುಗಳೆಲ್ಲವೂ ಬೇಕೇಬೇಕು ಎಂಬ ದುರಾಸೆ ದೊಡ್ಡ
ಅನಾಹುತಗಳಾಗಿ ಕಾಣಿಸಿಕೊಳ್ಳುತ್ತವೆ.
5.ಜನಪ್ರಿಯ ಹೋಟೆಲಿನ ಮಾಲೀಕನಿಗೆ ತಂಪುಪಾನೀಯ ಕಂಪನಿ ಹೇಳಿದ್ದೇನು?
ಉತ್ತರ : ಜನಪ್ರಿಯ ಹೋಟಲಿನ ಮಾಲೀಕನಿಗೆ ತಂಪು ಪಾನೀಯದ ಕಂಪನಿಯೊಂದು ಆತನನ್ನು ಸಂಪರ್ಕಿಸಿ
‘ನೀವು ಗ್ರಾಹಕರಿಗೆ ಬಂದೊಡನೆ ನೀರು ಕೊಡುವುದನ್ನು ನಿಲ್ಲಿಸಿದರೆ, ಇಷ್ಟು ಹಣ ಕೊಡುವುದಾಗಿ’ ಹೇಳಿತ್ತು.
ಇ. ಕೊಟ್ಟಿರುವ ಪ್ರಶ್ನೆಗಳಿಗೆ ಐದು-ಆರು ವಾಕ್ಯಗಳಲ್ಲಿ ಉತ್ತರಿಸಿ.
1. ದುಡ್ಡಿಲ್ಲದೇ ಕುಡಿಯಬಲ್ಲ ನೀರು ಸಿಗುತ್ತಿದ್ದ ಕಾಲದ ಬಗ್ಗೆ ಲೇಖಕರ ಅಭಿಪ್ರಾಯವೇನು?
ಉತ್ತರ : ನಮ್ಮ ನಾಡಿನಲ್ಲಿ ರೈಲು ನಿಲ್ದಾಣಗಳಲ್ಲಿ, ಬಸ್ಸು ನಿಲ್ದಾಣಗಳಲ್ಲಿ, ವಿಮಾನ ನಿಲ್ದಾಣಗಳಲ್ಲೂ ‘ದುಡ್ಡಿಲ್ಲದೆ
ಕುಡಿಯಬಲ್ಲ ’ ನೀರನ್ನು ಇರಿಸುತ್ತಿದ್ದರು. ಬಾಯಾರಿದಾಗ ಈಗಲೂ ಹೋಟೆಲು ಒಂದಕ್ಕೆ ಹೋಗಿ ನೀರು ಕುಡಿದು ಬರಬಹುದು. ಮನೆಯ ಹೊರಗೆ ಕಾಂಪೌಂಡ್ ಗೋಡೆಗೆ ಸಣ್ಣ ತೊಟ್ಟಿ ಕಟ್ಟಿ “ದನಕರಗಳು ನೀರು ಕುಡಿದುಹೋಗಲಿ” ಎಂದು ನೀರು ತುಂಬಿಡುತ್ತಿದ್ದರು. ಅಲ್ಲಲ್ಲಿ ಅಂಗಡಿಗಳಲ್ಲಿಯೂ ಸಹ ಮಣ್ಣಿನ ಮಡಿಕೆಯಲ್ಲಿ ನೀರು ತುಂಬಿಡುತ್ತಿದ್ದರು. ಅನೇಕ ಗುರುದ್ವಾರದ ಬಳಿ ಸ್ವಯಂ ಸೇವಕರು ನೀರಿನ ದೊಡ್ಡ ಕೊಳಾಯಿ ಹಿಡಿದು,
ನಿಲ್ಲಿಸಿದ ಆಟೋ, ಬಸ್, ಹಾಗೂ ದಾರಿಹೋಕರಿಗೆಲ್ಲ ಉಚಿತವಾಗಿ ನೀರು ತುಂಬಿ ಕುಡಿಸುತ್ತಿದ್ದರು. ಇವೆಲ್ಲವನ್ನು ನಾವು ಕೇವಲ ಭಾರತದಲ್ಲಿ ಕಾಣುತ್ತೇವೆ. ಆದರೆ ವಿದೇಶಗಳಲ್ಲಿ ದುಡ್ಡು ಕೊಟ್ಟರೂ ಸಹ ನೀರು
ಸಿಗುವುದಿಲ್ಲ.
2. ಕಂಪನಿಗಳು ಅಪ್ಪಟ ಅಗತ್ಯದ ವಸ್ತುಗಳನ್ನು ‘ಇವಿಲ್ಲದೆ ಬದುಕಿಲ್ಲ’ ಎಂಬಂತೆ ಹೇಗೆ ಬಿಂಬಿಸುತ್ತಿವೆ?
ಉತ್ತರ : ನಮ್ಮ ಭಾರತೀಯ ಸಂಸ್ಕೃತಿಯ ಬುನಾದಿಯನ್ನು ಜೀವನಶೈಲಿಯನ್ನು, ನಂಬಿಕೆಗಳನ್ನು,
ಮೌಲ್ಯಗಳನ್ನು, ಸಂಸ್ಕೃತಿಯ ಬುನಾದಿಯನ್ನು ಅಲುಗಿಸುವ ‘ಕೊಳ್ಳುಬಾಕತನ’. ಅಗತ್ಯಗಳಲ್ಲಿ ನಡೆದು
ಹೋಗುತ್ತಿದ್ದ ಬದುಕು, ಇಂದು ‘ಬೇಕು’ಗಳ ಬಲೆಗೆ ಬಿದ್ದಿದೆ. ಮಾರುಕಟ್ಟೆಗೆ ಬಂದದ್ದೆಲ್ಲವು ಬೇಕು. ಬೇಕುಗಳನ್ನು ‘ಅಗತ್ಯ’ಗಳಾಗಿ, ಜಾಹೀರಾತಿನಲ್ಲಿ ಕೊಳ್ಳುವಂತೆ ಬಿಂಬಿಸುತ್ತವೆ. ಆರಾಮ, ಐಷಾರಾಮದ, ಅಪ್ಪಟ ಅನಗತ್ಯದ ವಸ್ತುಗಳನ್ನು ‘ಇವಿಲ್ಲದೆ ಬದುಕಿಲ್ಲ’ ಎಂಬಂತೆ ಬಿಂಬಿಸುತ್ತಾರೆ. ‘ಡಿಓಡರೆಂಟ್’ ಹಾಕಿಕೊಳ್ಳದೆ ಇದ್ದರೆ ‘ತಾನು ನಾತ ಬಡಿಯುತ್ತೇನೆ’ ಎಂಬಷ್ಟು ಕೀಳಿರುಮೆಯನ್ನು ಹುಟ್ಟಿಸಬಲ್ಲರು . ಕೊನೆಗೆ ಎಲ್ಲವೂ ನಿಮ್ಮನ್ನು ಕೊಳ್ಳುವಂತೆ ಪ್ರೇರೇಪಿಸುತ್ತವೆ.
3. ಲೇಖಕಿಗೆ ಬೆಂಗಳೂರಿನಲ್ಲಿ ‘ನೀರು ಕೊಡದ ಸಂಸ್ಕೃತಿಯ’ ಬಗ್ಗೆ ಆದ ಅನುಭವವನ್ನು ಬರೆಯಿರಿ.
ಉತ್ತರ : ಲೇಖಕಿ ಮತ್ತು ಅವರ ಮಗಳು ಮಹಾತ್ಮಗಾಂಧಿ ರಸ್ತೆಯ ‘ಬಾಂಬೆ ಬಜಾರ್’ ಎದುರಿನ ಪುಟ್ಟ
ಜಾಯಿಂಟ್ನಲ್ಲಿ ಹೋಗಿ ಕುಳಿತರು . ಇಲ್ಲಿ ನೀರು ತಂದಿಡಲಿಲ್ಲ. ಐಸ್ಕ್ರೀಂ ತಿಂದ ಇವರು ‘ನೀರು ಬೇಕು’
ಎಂದು ಕೇಳಿದರು. ‘ಮಿನಿರಲ್ ವಾಟರ್?’ ವೇಟರ್ ಪ್ರಶ್ನಿಸಿದನು. ‘ಇಲ್ಲಪ್ಪ ಸಾಮಾನ್ಯ ನೀರು’ ಎಂದರು.
ಮಾಯವಾದ ವೇಟರ್ ಹದಿನೈದು ನಿಮಿಷ ಕಾದರೂ ಬರಲೇ ಇಲ್ಲ. ಕಾದು ಕಾದು ಸುಸ್ತಾಗಿ ಕೊನೆಗೆ
ಕೌಟರಿಗೇ ಹೋಗಿ, ಬಿಲ್ಲು ಕೊಟ್ಟು ಹೊರಬಿದ್ದರು. ಅದೇ ವೇಟರ್, ಪುಟ್ಟ ಪುಟ್ಟ ಬಾಟಲಿಗಳಲ್ಲಿ ಮಿನರಲ್
ವಾಟರುಗಳನ್ನು ಬೇರೆ ಬೇರೆ ಮೇಜಿಗೆ ಸರಬರಾಜು ಮಾಡುವುದು ಕಂಡಿತು. ‘ಮಿನಿರಲ್ ವಾಟರ್?’ ಎಂದ
ಅವರು ಕೇಳುವ ಭಂಗಿ ಭಾವ ಹೇಗಿರುತ್ತದೆ ಎಂದರೆ ನಿಮಗೆ ‘ಆರ್ಡಿನರಿ ವಾಟರ್’ ಎಂದು ಹೇಳಲೂ ಹಿಂಜರಿಕೆಯಾಗಬೇಕು. ಮತ್ತೊಂದು ದಿನ ಮಾಲತಿಯೊಡನೆ ಇಂದಿರಾನಗರದ ಪುಟ್ಟ ಜಾಯಿಂಟ್ಗೆ ಹೋಗಿ ‘ಮಿಸಿಸಿಪಿ ಮಡ್ ಪೀ’ ಆರ್ಡರ್ ಮಾಡಿದರು. ದೊಡ್ಡ ಬಿಳಿ ಪಿಂಗಾಣಿ ತಟ್ಟೆಯಲ್ಲಿ ಕೇಕ್ ಮತ್ತು ಐಸ್ಕ್ರೀಂ ಇರಿಸಿ, ಮೇಲೆ ಕೋಕೋ ಪುಡಿ ಉದುರಿಸಿ ಆಕರ್ಷಕವಾಗಿ ತಂದಿಟ್ಟರು. ಇಲ್ಲೂ ನೀರು ಕೊಟ್ಟಿರಲಿಲ್ಲ . ‘ನೀರು ಕೊಡಿ’ ಎಂದರು ‘ಮಿನಿರಲ್ ವಾಟರ್?’ ಎಂದಳು ಸರ್ವ್ ಮಾಡುತ್ತಿದ್ದ ಹುಡುಗಿ. ‘ಇಲ್ಲ ಸಾಧಾರಣ ನೀರು’ ಎಂದರೆ, ನಮ್ಮಲ್ಲಿ ಸಾಧಾರಣ ನೀರು ಇಲ್ಲ ಎಂದಳು. ಮತ್ತೇ ಲೇಖಕಿಯವರು ‘ಬನ್ನಿ ಮಾಲತಿ ಸಾಗರ್ಗೆ, ಪಾನಿಪುರಿ
ತಿನ್ನೋಣ’ ಎಂದೆ. ಎದುರಿಗೊಂದು ‘ಸಾಗರ್’ ಹೋಟೆಲಿತ್ತು. ನುಗ್ಗಿದರು. ಕುಳಿತೊಡನೆ ವೇಟರ್ ಬಂದು
ನಾಲ್ಕು ಲೋಟ ನೀರು ತಂದಿಟ್ಟ. ಬರೀ ಬಾಯಲ್ಲ ಮನಸ್ಸೂ ತಂಪಾಯಿತು.
ಈ. ಖಾಲಿಬಿಟ್ಟ ಜಾಗಗಳನ್ನು ಸೂಕ್ತ ಉತ್ತರಗಳಿಂದ ಭರ್ತಿ ಮಾಡಿರಿ.
1. ಭಾರತದಿಂದ ಹೊರಗೆ ಕಾಲಿಟ್ಟರೆ ಉಳಿದೆಲ್ಲವು __________
2. ಈ ದೇಶಗಳಲ್ಲಿ ಮನೆಯ _______ ಯಲ್ಲಿ ಬರುವ ನೀರನ್ನು ಕುಡಿಯುವುದಿಲ್ಲ.
3. ಗ್ರೀಟಿಂಗ್ಸ್ ಕಾರ್ಡ್ ಮಾರುವ ಹೊಸ_________ ಗಳೆಂದು ಸರ್ವರಿಗೂ ವೇದ್ಯವಾಗಿದೆ.
4. ಸ್ಯಾಂಡ್ವಿಚ್ ಬರ್ಗರ್ ಜೊತೆಗೆ ದೊಡ್ಡ ಗಾತ್ರದ ___________ ನೀಡುತ್ತಾರೆ.
ಸರಿ ಉತ್ತರಗಳು.
1. ನೀರು ಕೊಡದ ನಾಡುಗಳು
2. ನಲ್ಲಿ
3. ಹುನ್ನಾರ
4ಕೋಲಾ
ಅಭ್ಯಾಸ ಚಟುವಟಿಕೆ
ಅ. ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಿ.
1. ಗುಣಿತಾಕ್ಷರ ಎಂದರೇನು?
ಉತ್ತರ : ವ್ಯಂಜನಕ್ಕೆ ಸ್ವರ ಸೇರಿದಾಗ ಆಗುವ ಅಕ್ಷರವೇ ಗುಣಿತಾಕ್ಷರ.
2. ಸಂಯುಕ್ತಾಕ್ಷರ ಎಂದರೇನು? ಉದಾಹರಣೆ ನೀಡಿ.
ಉತ್ತರ : ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವೇ
ಸಂಯುಕ್ತಾಕ್ಷರ.
ಉದಾ : ಅಪ್ಪ ಅಮ್ಮ ಅಕ್ಷರ ಅಸ್ತ್ರ
3. ದೇಶ್ಯ ಮತ್ತು ಅನ್ಯ ದೇಶ್ಯ ಪದಗಳನ್ನು ಪಟ್ಟಿ ಮಾಡಿ.
ಉತ್ತರ : ದೇಶ್ಯ ಪದಗಳು ಕೈ, ಕಾಲು, ಬಾಯಿ, ಅಜ್ಜ, ಅಜ್ಜಿ, ಅಪ್ಪ, ಅಮ್ಮ, ಚಿಕ್ಕಪ್ಪ, ಅಣ್ಣ ಇತ್ಯಾದಿ.
ಅನ್ಯದೇಶ್ಯ ಪದಗಳು ಕೋರ್ಟು, ಬ್ಯಾಂಕು, ಹಾರ್ಮೋನಿಯಂ, ಹೋಟೆಲು, ಅಲಮಾರು, ಸಾಬೂನು,
ಮೇಜು
4. ಕನ್ನಡದಲ್ಲಿರುವ ಯಾವುದಾದರು ಐದು ತದ್ಭವ ಪದಗಳನ್ನು ಪಟ್ಟಿ ಮಾಡಿ.
ಉತ್ತರ : ಬಸದಿ, ಬೇಸಗೆ, ಕೊಡಲಿ, ಬಸವ, ಬಿನ್ನಣ,
5. ಕೊಟ್ಟಿರುವ ಪದಗಳಲ್ಲಿರುವ ಗುಣಿತಾಕ್ಷರಗಳನ್ನು ಪ್ರತ್ಯೇಕಿಸಿ ಬರೆಯಿರಿ.
ಹೋಟೆಲ್ – ಹ್+ಓ+ಟ್+ಎ+ಲ್
ಮಾಲೀಕ – ಮ್+ಆ+ಲ್+ಈ+ಕ್+ಅ
ರಸ್ತೆ – ರ್+ಸ್+ತ್+ಎ
ಗ್ರಾಹಕ – ಗ್+ರ್+ಆ+ಹ್+ಅ+ಕ್+ಅ
ಇವರು – ಇ+ವ್+ಅ+ರ್+ಉ
ಪುಣ್ಯಾತ್ಮ – ಪ್+ಉ+ಣ್+ಯ್+ಆ+ತ್+ಮ್+ಅ
ಕೊಟ್ಟಿರುವ ಪದಗಳಲ್ಲಿರುವ ಸಜಾತೀಯ ಮತ್ತು ವಿಜಾತೀಯ ಸಂಯುಕ್ತಾಕ್ಷರಗಳನ್ನು ಆರಿಸಿ ಬರೆಯಿರಿ.
ದಿನಪತ್ರಿಕೆ ಅಗತ್ಯ ಅಮ್ಮ ವಸ್ತು
ಪುಕ್ಕಟೆ ಹಣ್ಣಿನರಸ ನಿಲ್ದಾಣ ಮಣ್ಣು
ಸಂಪ್ರದಾಯ ಶುದ್ಧ ಅಗ್ಗ ಸಂಸ್ಕೃತಿ
ಪ್ರವಾಸ ಶಕ್ತಿ, ಹುನ್ನಾರ .
ಸಜಾತೀಯ ವಿಜಾತೀಯ
ಅಮ್ಮ ದಿನಪತ್ರಿಕೆ
ಪುಕ್ಕಟ್ಟೆ ಅಗತ್ಯ
ಹಣ್ಣಿನರಸ ವಸ್ತು
ಮಣ್ಣು ನಿಲ್ದಾಣ
ಶುದ್ಧ ಸಂಪ್ರದಾಯ
ಅಗ್ಗ ಸಂಸ್ಕೃತಿ
ಹುನ್ನಾರ ಪ್ರವಾಸ
ಶಕ್ತಿ
ಕೊಟ್ಟಿರುವ ಪದಗಳ ತದ್ಭವ ರೂಪ ಬರೆಯಿರಿ
ವರ್ಷ – ವರುಷ
ಪ್ರಾಣ – ಹರಣ
ಶಕ್ತಿ – ಶಕುತಿ
ಪುಣ್ಯ – ಹೂನ
ಕೊಟ್ಟಿರುವ ಪದಗಳಲ್ಲಿರುವ ದೇಶೀಯ ಮತ್ತು ಅನ್ಯದೇಶೀಯ ಪದಗಳನ್ನು ಆರಿಸಿ ಬರೆಯಿರಿ
ದೊಡ್ಡದು ಬಸ್ಸು ಬರ್ಗರ್ ಪಾನಕ ವಾಟರ್ ಸಣ್ಣ ಹುನ್ನಾರ
ದೇಶೀಯ ಪದಗಳು : ದೊಡ್ಡದು, ಪಾನಕ, ಸಣ್ಣ ಹುನ್ನಾರ.
ಅನ್ಯ ದೇಶೀಯ ಪದಗಳು : ಬರ್ಗರ್, ಬಸ್ಸು, ವಾಟರ್.
No comments:
Post a Comment