Saturday, July 13, 2024

About organizing quiz competition for students.

  Wisdom News       Saturday, July 13, 2024
Hedding ; About organizing quiz competition for students...


2024-25ನೇ ಸಾಲಿನ ಯೋಜನಾ ಅನುಮೋಧನಾ ಮಂಡಳಿಯಿಂದ "ರಾಷ್ಟ್ರೀಯ ಅವಿಷ್ಕಾ‌ ಅಭಿಯಾನ" ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲು ಪ್ರಾಥಮಿಕ ವಿಭಾಗಕ್ಕೆ ರೂ.35.00 ಲಕ್ಷಗಳು ಹಾಗೂ ಪ್ರೌಢಶಾಲಾ ವಿಭಾಗಕ್ಕೆ ರೂ.35.00 ಲಕ್ಷಗಳು ಒಟ್ಟು ರೂ.70.00 ಲಕ್ಷಗಳ ಅನುದಾನ ಅನುಮೋದನೆಯಾಗಿರುತ್ತದೆ.

ರಸಪ್ರಶ್ನೆ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವಂತಹ ಚಟುವಟಿಕೆಗಳನ್ನು ಮತ್ತು ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ಇತರೆ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿ ಸಲು ಪೂರಕವಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಹಾಗೂ ತಂತ್ರಜ್ಞಾನ ವಿಷಯಗಳ ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು. ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ, ಅವರಲ್ಲಿ ಸ್ಪರ್ಧಾಮನೋಭಾವನೆಯನ್ನು ಬೆಳೆಸುವುದು.

ಸ್ಪರ್ಧೆಯ ಹಂತಗಳು: ಶಾಲಾ, ತಾಲ್ಲೂಕು, ಜಿಲ್ಲಾ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಆಯೋಜಿಸುವುದು.
1. ಜೂನಿಯರ್ ಹಂತ - (5-7 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)
2. ಸೀನಿಯರ್ ಹಂತ - (8-10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)
ಸ್ಪರ್ಧೆಯ ನೋಂದಣಿ ಮತ್ತು ಪ್ರಕ್ರಿಯೆ: ಪ್ರತಿ ಶಾಲೆಯಿಂದ ಶಾಲಾ ಹಂತದ ಸ್ಪರ್ಧೆಗೆ ಶಿಕ್ಷಕರು ಗಣಿತ, ವಿಜ್ಞಾನ, ತಂತ್ರಜ್ಞಾನ, ಭಾರತದ ಇತಿಹಾಸ-ಪರಂಪರೆ, ಭೌಗೋಳಿಕ, ಸಾಂಸ್ಕೃತಿಕ, ಸಾಹಿತ್ಯ, ಭಾಷೆ, ಕಲೆ, ಸಾಮಾನ್ಯ ಜ್ಞಾನ, ಕ್ರೀಡೆ, ಮಾನಸಿಕ ಸಾಮರ್ಥ್ಯ, ಪುಚಲಿತ ವಿದ್ಯಾಮಾನ ಇತ್ಯಾದಿ ವಿಷಯಗಳನ್ನೊಳಗೊಂಡಂತೆ ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡು (ಕನಿಷ್ಟ 50 ಬಹು ಆಯ್ಕೆಯ ಪ್ರಶ್ನೆಗಳು) ಉತ್ತರ ಸಹಿತ ಸಿದ್ಧಪಡಿಸಿ, ಮುಖ್ಯಶಿಕ್ಷಕರಿಂದ ಅನುಮೋದಿಸಿಕೊಂಡು ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಹಮ್ಮಿಕೊಳ್ಳುವುದು.
ಶಾಲಾ ಹಂತದ ಸ್ಪರ್ಧೆಯಲ್ಲಿ ಪಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿ ವಿಜೇತರಾದ 3 ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕರು ವಿದ್ಯಾರ್ಥಿಗಳ SATS ID, ಮೊಬೈಲ್ ಸಂಖ್ಯೆ ಭಾವಚಿತ್ರ ಹಾಗೂ ಬ್ಯಾಂಕ್ ಖಾತೆಯ ವಿವರವನ್ನು ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್‌ನ್ನು ಬಳಸಿ ವಿದ್ಯಾವಾಹಿನಿ Portal ನಲ್ಲಿ ನೋಂದಣಿ ಮಾಡುವುದು ಹಾಗೂ ವಿದ್ಯಾವಾಹಿನಿ Portal ನಲ್ಲಿ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿ ವಿದ್ಯಾರ್ಥಿಗಳಿಗೆ ನೀಡಿ ಮಕ್ಕಳನ್ನು ಪ್ರೋತ್ಸಾಹಿಸುವುದು.


ಶಾಲಾ ಮಟ್ಟದಿಂದ ತಾಲ್ಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸ್ಪರ್ಧಿಗಳಿಗೆ ನಿಗದಿಪಡಿಸಿದ ದಿನಾಂಕದಂದು ಶಾಲೆಯಲ್ಲಿ ಶಾಲಾ ಸಮಯದಲ್ಲಿ ಮುಖ್ಯ ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು. ಬಹುಲಾಗಿನ್‌ಗಳಿಗೆ ಅವಕಾಶವಿರುವುದಿಲ್ಲ. ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಪಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ 3 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪಮಾಣ ಪತ್ರವನ್ನು ನೀಡಲಾಗುವುದು. ಬಹುಮಾನದ ಮೊತ್ತವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಾಗುವುದು.
ತಾಲ್ಲೂಕು ಹಂತದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜೂನಿಯರ್ ಹಾಗೂ ಸೀನಿಯರ್ ವಿಭಾಗದಿಂದ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


logoblog

Thanks for reading About organizing quiz competition for students.

Previous
« Prev Post

No comments:

Post a Comment